ಭಾನುವಾರ, ಮೇ 28, 2017

ಗೆಲುವೇ ಗೆಲುವೇ

ಗೆಲುವೇ ಗೆಲುವೇ ಬಾ ಗೆಲುವೇ
ನಿನಗಾಗಿ ನಾಲ್ಕುಗೋಡೆಗಳ ಮಧ್ಯೆ
ದುಡಿಯುವೆ ನಾನು
ನಿನಗಾಗಿ ಶ್ರದ್ಧೆ ಭಕ್ತಿಗಳನ್ನು
ಪಣವಾಗಿಡುವೆ ನಾನು
ಜಗಮಗಿಸುವ ಬೆಳಕಿನ ಚಿತ್ತಾರದ
ವೇದಿಕೆಯೊಳಗೆ ಅಪ್ಪು ಬಾ ನನ್ನ
ಸಾವಿರಾರು ಜನರ ಹಾರೈಕೆ
ಅದಕೆ ಆಧಾರವಾಗಲಿ
ಅವರ ಚಪ್ಪಾಳೆ ಅದಕೆ ಸಾಕ್ಷಿಯಾಗಲಿ
ಅದರೊಳಗೆ ನಾನೆಂಬುದು
ಬರಿ ನೆಪವಾಗಲಿ.

ಏನು ಬೇಕು ನಿನಗೆ
ಏನ ಬಯಸುವೆ ನೀನು
ಯಾರನಪ್ಪುವೆ ನೀನು
ಯಾರನು ಇಡಾಡುವೆ ನೀನು
ಬಿಡು ಇದೊಂದು ಗುಟ್ಟನು
ನನ್ನೊಡನೆ
ನೀನೆಳೆದ ಪರಿಧಿಯೊಳಗೆ
ನೀನೆಣಿಸುವ ರೀತಿಯಲೆ ಸುತ್ತುವೆ
ನನ್ನೊಮ್ಮೆ ಅಪ್ಪು ಬಾ
ನಿನ್ನಪ್ಪುಗೆಯಲ್ಲಿ ಸಿಹಿ ಸುಖ ಕಂಡವರೆಷ್ಟು?
ಕೆಲವರಷ್ಟೇ


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಕೊನೆಯ ಬರಹ

ಕನ್ನಡಿಗರ ಕವಾಯತು

ಇತ್ತೀಚೆಗೆ ಕರ್ನಾಟಕದ ಖ್ಯಾತ ವಾಸ್ತು ತಜ್ಞರೊಬ್ಬರು ಕೊಲೆಗೀಡಾದ ವಿಚಾರ ನಿಮಗೆಲ್ಲ ಗೊತ್ತಿದೆ. ಸರಳ ವಾಸ್ತು ಹೆಸರಿನ ಖ್ಯಾತಿಯ ಅವರು ದಾರುಣವಾಗಿ ಕೊಲೆಗೀಡಾದರು. ಅದರ ಹಿಂ...