ಮಂಗಳವಾರ, ಆಗಸ್ಟ್ 22, 2017

ಎಡವಿದವರು - ಕೆಡವಿದವರು

ಭುವಿಯೂರಲ್ಲಿ ಎಡವದವರಿಲ್ಲ
ದಾಳಿ ದಾರ್ಷ್ಟ್ರ್ಯಗಳೊಳಗೆ ಕೆಡವದವರಿಲ್ಲ
ಎಡವಿದವರೇಳಲು ಎದ್ದವರೆಡವಲು
ಬಾಳೊಂದು ಬೀಳ್ಗಲ್ಲು ಬಿದ್ದೇಳಿ ಮಾಮೂಲು
ಬಿದ್ದವರೊಡನಾಡಿ ಪಾರುಗಾರ ಪರಮಾತ್ಮ

ಕಟ್ಟಿದುದ ಕೆಡವಲು ಕೆಡವಿದುದ ಕಟ್ಟಿ
ನಿಲುಹಲು ಇರುವ ಗೊಡವೆಯೇ ಬೇಡದೆ
ಯಾವನೋ ಕಟ್ಟಿಗಾಣಿಸಿದ ಪಂಜಿನರಮನೆಯೊಳಾಡುವನು
ಒಲೆ ಮುಂದಲ ಶೂರ ಅರಸೊತ್ತಿಗೆ ಭಿತ್ತಿಗಳ
ಮುಂದಲ ಮಹಾರಾಜಾ

ಆರಾರು ಕಟ್ಟಿ ಆರಾರು ಕೆಡವುದೀ ಬಾಳೊಂದು
ಕಟ್ಟಿ ಕಡಿದುರುಳಿಸುವ ಬೀಳ್ಗಲ್ಲು ಕಡೆಗಲ್ಲು
ಅರಿಮೆಯಿಕ್ಕಳ ಗುರಿಯಿಕ್ಕಿ ತಾ ತಗೆದಿದುದೇನು
ತಡಕದರೊಳಗೆ ಬಾಳ್ಗೇನು ಹಿರಿಮೆ
ಅರಿತರೆ ನೀ ಜ್ಞಾನಿ ತಪ್ಪಿತೋ ಜ್ಞಾನ ದಾರಿಗ ನೀ 

ಆರು ಎಂತೆಣಿಸಿದರಂತೇ ಈ ಬಾಳು
ಬಾಳ್ಕಟ್ಟಲು ವಾಡಗೆಯ ಭೋಗವೀ ದೇಹ
ಬಾಳ್ಕೆಡವಲು ವೀರನೆಂಬ ಅಂಕಿತವೇಕೆ
ಅರಿಮೆಯ ಗುರು ಹೃದಯದೊಳಿದ್ದು
ಕೆಡಲ್ಗೊಡುವುದೇ

ಆ ಅರಿಮೆಯೇ ಗುರು...ಆ ಗುರುವೇ
ಭುವಿಯೂರ ದೈವ
ಮೆಚ್ಚಿದನು ಪೆಚ್ಚದೆ ಕಡು ಸತ್ಯ
ಕೊನೆಯೊಳಗೆ ಪೆಚ್ಚುಗಾರ ನೀನಲ್ಲ
ಬೆಳಗಿಸೊಮ್ಮೆ ಅರಿಮೆಯ ಅಂತರಾತ್ಮವ
ಬಟಾ ಬಯಲು ನಿನ್ನೀ ಹೃದಯದಲಿ  

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಕೊನೆಯ ಬರಹ

ಯುಗರ್ಷಿ

ಹುಟ್ಟುವ ಮೊದಲೇ ಸೋದರಮಾವನಿಗೆ ಅನಿಷ್ಟನಾದೆ, ಅದೇ ಮೂಲವಾಗಿ ತಂದೆ-ತಾಯಿಗೆ ಜೈಲು ಕಂಟಕನಾದೆ, ಅಲ್ಲಿಂದಲೆಂತೋ ಯಶೋಧೆಯ ಮಡಿಲು ಸೇರಿಕೊಂಡೆ, ಅಲ್ಲೇನು ಸುಖವ...