ಭಾನುವಾರ, ನವೆಂಬರ್ 26, 2017

ಇರದಿದುಮ್ ಅವಗಾಹಿಸಿ ಇರ್ಪುದ ಸ್ಪುರಿಸು

ಧರ್ಮ ತಾನ್ ದೇವರಾಗಿ
ನಿನ್ನಿಂದ ಕೈ ಮುಗಿಸಿ
ತಾನಿರ್ಪ ಜಗದಾಗರಗಳಾವನೂ
ಎಳೆಯೊಳಗೂ ಅರುಹದೇ

ಇದೇಮ್ ಧರ್ಮ ನಿರಪೇಕ್ಷ ಪರೀಕ್ಷೆ
ಅದರೊಳಗೂ ಇಳಿ
ಬರುವುದಿರುವುದೇಮ್ ತಾನಳೆದು
ಇರದಿಹ ಗುಣವಂ ಅವಗಾಹಿಸಿ
ಇರ್ಪುದ ಸ್ಪುರಿಸು
ಅದೇ ಧರ್ಮ
ಅದೇ ಜ್ಞಾನ
ಅದೇ ವಿಜ್ಞಾನ

ನಗುತಿಹಳು ನೋಡಲ್ಲಿ ಕನ್ನಡಮ್ಮ

ಕನ್ನಡವ ಉಳಿಸೆನ್ನದಿರು
ಕನ್ನಡವ ಬೆಳೆಸೆನ್ನದಿರು
ಕನ್ನಡವನುಳಿಸಿ ಬೆಳೆಸಲು
ಅದೇನು ಕಮರುತಿರುವ ಗಿಡವೇ ?
ಬತ್ತುತ್ತಿರುವ ನದಿಯೇ?

ಕನ್ನಡವೊಂದು ಹೆಮ್ಮರ
ನೆರಳರಸಿ ಬರುವರಿಗಾಶ್ರಯ
ದಣಿದವರಿಗೊಂದು ತಂಗುದಾಣ
ಬಳಲಿದವರ ತಲೆಗೊಂದು
ಮೆತ್ತೆ ಹೂವಿನ ತಲೆದಿಂಬು

ಹಮ್ಮೇನು ಬಿಮ್ಮೇನು
ಯಾರ ಹಂಗೇನು ಕನ್ನಡಕೆ
ಯುಗ ಯುಗಾಂತರಗಳುರುಳಿ
ತಲೆ ತಲಾಂತರಗಳಳಿದರೂ
ಚೆಲುವೆಲ್ಲ ತನ್ನದೆಂದು
ನಗುತಿಹಳು ನೋಡಲ್ಲಿ ಕನ್ನಡಮ್ಮ.

ಬುಧವಾರ, ನವೆಂಬರ್ 15, 2017

ಸೌಜನ್ಯ

ಮೌನವೆಂದರೇನು?
ಮಾತೆಂದರೇನು?
ಮೌನ ಮಾತುಗಳ ಬೆಲೆ
ಎಲ್ಲೆಲ್ಲಿ ಎಷ್ಟೆಷ್ಟು
ಎಲ್ಲಕೂ ಬೆಲೆಯಿದು
ಸೌಜನ್ಯ!

ಪ್ರಕೃತಿಯೆಂದರೇನು?
ವಿಕೃತಿಯೆಂದರೇನು?
ಪ್ರಕೃತಿ ವಿಕೃತಿಗಳೆರಡಕ್ಕೂ
ಜುಗಲ್ ಬಂದಿ ಅದೇ
ಸೌಜನ್ಯ!

ಅಕ್ರಮ ತಾನ್ ಮನದೊಳಗೆ
ಮೇರೆ ಮೀರಿ
ಉಕ್ಕಿ ಹರಿಯೆ
ಸಕ್ರಮ ತಾನ್ ಮನದೊಡೆಯ
ತಂದು ತಹಬದಿಯದು
ಸೌಜನ್ಯ!

ಗುರುವಾರ, ನವೆಂಬರ್ 9, 2017

ಬಾಳಿಗೊಂದು ದೀಪಿಕೆ

ಕಾರ್ಯದಲ್ಲೊಂದು ತತ್ಪರತೆ
ಬದುಕೊಳಗೊಂದು ಘನತೆ
ಅನ್ಯರೊಡನಾಟಗಳೊಳಗೂ
ಅವರರವರ ಬಾಳ್ಗೊಂದು ದೀಪಿಕೆ

ಏನಿಲ್ಲಿ ಕಾಣುತಿಹುದು?
ತಂತ್ರ- ಜ್ಞಾನಗಳನೆಲ್ಲ ಮೀರಿದ
ಮಾನವೀಯತೆ
ಕನ್ನಡವೇ ತಾನ್ ಮನುಜನಾಗಿ
ಅವತರಿಸಿ ಕುಂತಂತೆ
ಧೀಮಂತ ಕನ್ನಡತಿ

ಮನವೇನು ಗುಣವೇನು
ಮನುಜನ ಬುದ್ಧಿಯ ಸುಪರ್ದಿ
ಯೊಳಗೇನೇನೊ ಮಾಯೆ
ಅದರೊಳಗಿಳಿದು ತನ್ನ ತಾ
ಮರೆತಂತೆ ಜೀವನರಂಗದೊಳಗೆ
ತಾ ಜಾಣೆ ಈ ಕನ್ನಡತಿ

ನುಡಿಸಿದರೆಷ್ಟೋ ಸಂತೋಷ
ನಗಿಸಿದರೆಷ್ಟೋ ಉನ್ಮಾದ
ಮನುಜರ ಮನವರಿದು
ನಡೆಯುವ ಈ ಪೆಣ್ ಗಿಲ್ಲ ಸೋಲು
ಇದು ಶತ ಸಿದ್ಧ.

ಶುಕ್ರವಾರ, ನವೆಂಬರ್ 3, 2017

ನಮ್ಮ ನರೇಶ

ಎತ್ತರದ್ದೊಂದು ನಿಲುವು
ದಿಟ್ಟವಾದ್ದೊಂದು ನೋಟ
ಅರಿವ ಜ್ಞಾನಗಳೊಳಗೆ
ಸ್ಪಷ್ಟವಾದ್ದೊಂದು ಅರಿಮೆ
ನಡೆಯೊಳಗೆ ನಿಜ
ಜೀವನವರಿತ ಚತುರ

ಹೇಳಿ-ಕೇಳುವುದರೊಳಗಿನ
ನಂಬಿಕೆಗಳನೆಲ್ಲಾ ದೂರ ನೂಕಿ
ತನ್ನಾತ್ಮ ಸಂತೋಷದೊಳಗೆ
ತಲ್ಲೀನನಿವನು
ಸಂತೋಷಿಗಳೊಳಗೂ
ದುಃಖಿಗಳೊಳಗೂ
ಅವರೇ ಆಗಿ ನಿಂತುಬಿಡುವನೀ
ಹುಡುಗ

ಆಗಾಗ ಬೆದಕಿರುವ 'ನೀನೊಬ್ಬ ದಡ್ಡ'
ಇನ್ನೊಮ್ಮೆ ಕೆಣಕಿರುವ 'ನೀನೊಬ್ಬ ಅದಮ'
ಇನ್ನಾರಲ್ಲೋ ಉಸುರಿರುವ 'ನಾನೊಬ್ಬ ಮೂರ್ಖ ಶಿಖಾಮಣಿ'ಯೆಂದು
ಇನ್ನು ಏನೇನೊ ಜನರ ಭಾವಗಳು
ಎಲ್ಲವನೂ ಕಂತೆ ಮಾಡಿ
ನನ್ನತ್ತ ತೂರಿರುವ,
ನಿಜಜೀವನ ರಂಗದ ಮಜಲೊಂದನು
ಇಲ್ಲೇ ಪರಿಚಯಿಸಿರುವ

ನನಗರಿಯದ ಜಗದ ಬಾಗಿಲನು
ತೋರಿರುವ
ತಾನೆತ್ತಲೂ ಸುಳಿಯದೇ
ಧೀಮಂತನಂತೆ ಕೂತಿರುವ
ದಾರಿಗಾರರಿಗೆ ಅಡ್ಡಲಾಗದೆ
ಸುಮ್ಮನಿದ್ದವರ ಮುಂದೆ ದೂಡದೆ
ತಾನೊಬ್ಬ ತಾಳ್ಮೆ ತಳೆದು ನಗುತಿರುವ
ಅವನೇ ನಮ್ಮ ನರೇಶ.

ಕಾಲದರಿವೇ ಗುರು!!

ಕಾಲ ತಾನ್ ಕಾಲಿಕ್ಕಿ
ಕಾಲ್ಗವುಚಿದನೆಲ್ಲ ಕಲಗಚ್ಚ
ಮಾಡಿ ಮುನ್ನಡೆಯುತಿರೆ
ಮಗುವೊ? ಮಂಗವೋ?
ನೀನೊಂದೂ ತಿಳಿಯದೆ
ಅರಳಿದ ಕಣ್
ಕೆರಳಿದ ಕಿವಿಮಾಡಿ
ಭ್ರಾಂತಿಯೊಳಗೆ ಬೆಚ್ಚುವುದೇನ್

ತರವಲ್ಲ ತಗಿ
ಕಾಲ ತಾನ್ ಥೇರನೇರಿ
ಧೂಳಿಕ್ಕಿ ತಾನ್ ಧೀಮಂತನಂತೆ
ಬರುತಿರೆ ಬೆದರಿ ಚದುರಿದ
ಅಂಬೆಗರುವಂತೆ
ಗ್ರಹಣ ಬಡಿದು ಕಲ್ಲೋಲಗೊಂಡ
ಕಡಲಂತೆ ಚಡಪಡುವಯೇನ್

ಒಡಮಾಡು ಸನ್ನದ್ಧನಾಗು
ಕಾಲದೂರಿಗೊಂದೇ ಕಾಲ್ದಾರಿ
ಗುರು ಗುರಿಗಳಿಲ್ಲದೆ
ತಾನೇ ಗುರುವಾಗಿ
ತನ್ನತ್ತ ಸೆಳೆಯುತಲಿಹುದು ನಿನ್ನ
ಅದರೊಳಗೆ ಹುದುಗಿಹೋಗುವ
ಮುನ್ನ ಸಾಧಿಸುವೆಯೇನ್!?

ಕಾಲದರಿವೇ ಗುರು!!!

ಕೊನೆಯ ಬರಹ

ಯುಗರ್ಷಿ

ಹುಟ್ಟುವ ಮೊದಲೇ ಸೋದರಮಾವನಿಗೆ ಅನಿಷ್ಟನಾದೆ, ಅದೇ ಮೂಲವಾಗಿ ತಂದೆ-ತಾಯಿಗೆ ಜೈಲು ಕಂಟಕನಾದೆ, ಅಲ್ಲಿಂದಲೆಂತೋ ಯಶೋಧೆಯ ಮಡಿಲು ಸೇರಿಕೊಂಡೆ, ಅಲ್ಲೇನು ಸುಖವ...