ಬುಧವಾರ, ನವೆಂಬರ್ 15, 2017

ಸೌಜನ್ಯ

ಮೌನವೆಂದರೇನು?
ಮಾತೆಂದರೇನು?
ಮೌನ ಮಾತುಗಳ ಬೆಲೆ
ಎಲ್ಲೆಲ್ಲಿ ಎಷ್ಟೆಷ್ಟು
ಎಲ್ಲಕೂ ಬೆಲೆಯಿದು
ಸೌಜನ್ಯ!

ಪ್ರಕೃತಿಯೆಂದರೇನು?
ವಿಕೃತಿಯೆಂದರೇನು?
ಪ್ರಕೃತಿ ವಿಕೃತಿಗಳೆರಡಕ್ಕೂ
ಜುಗಲ್ ಬಂದಿ ಅದೇ
ಸೌಜನ್ಯ!

ಅಕ್ರಮ ತಾನ್ ಮನದೊಳಗೆ
ಮೇರೆ ಮೀರಿ
ಉಕ್ಕಿ ಹರಿಯೆ
ಸಕ್ರಮ ತಾನ್ ಮನದೊಡೆಯ
ತಂದು ತಹಬದಿಯದು
ಸೌಜನ್ಯ!

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಕೊನೆಯ ಬರಹ

ಕನ್ನಡಿಗರ ಕವಾಯತು

ಇತ್ತೀಚೆಗೆ ಕರ್ನಾಟಕದ ಖ್ಯಾತ ವಾಸ್ತು ತಜ್ಞರೊಬ್ಬರು ಕೊಲೆಗೀಡಾದ ವಿಚಾರ ನಿಮಗೆಲ್ಲ ಗೊತ್ತಿದೆ. ಸರಳ ವಾಸ್ತು ಹೆಸರಿನ ಖ್ಯಾತಿಯ ಅವರು ದಾರುಣವಾಗಿ ಕೊಲೆಗೀಡಾದರು. ಅದರ ಹಿಂ...