ಗುರುವಾರ, ನವೆಂಬರ್ 9, 2017

ಬಾಳಿಗೊಂದು ದೀಪಿಕೆ

ಕಾರ್ಯದಲ್ಲೊಂದು ತತ್ಪರತೆ
ಬದುಕೊಳಗೊಂದು ಘನತೆ
ಅನ್ಯರೊಡನಾಟಗಳೊಳಗೂ
ಅವರರವರ ಬಾಳ್ಗೊಂದು ದೀಪಿಕೆ

ಏನಿಲ್ಲಿ ಕಾಣುತಿಹುದು?
ತಂತ್ರ- ಜ್ಞಾನಗಳನೆಲ್ಲ ಮೀರಿದ
ಮಾನವೀಯತೆ
ಕನ್ನಡವೇ ತಾನ್ ಮನುಜನಾಗಿ
ಅವತರಿಸಿ ಕುಂತಂತೆ
ಧೀಮಂತ ಕನ್ನಡತಿ

ಮನವೇನು ಗುಣವೇನು
ಮನುಜನ ಬುದ್ಧಿಯ ಸುಪರ್ದಿ
ಯೊಳಗೇನೇನೊ ಮಾಯೆ
ಅದರೊಳಗಿಳಿದು ತನ್ನ ತಾ
ಮರೆತಂತೆ ಜೀವನರಂಗದೊಳಗೆ
ತಾ ಜಾಣೆ ಈ ಕನ್ನಡತಿ

ನುಡಿಸಿದರೆಷ್ಟೋ ಸಂತೋಷ
ನಗಿಸಿದರೆಷ್ಟೋ ಉನ್ಮಾದ
ಮನುಜರ ಮನವರಿದು
ನಡೆಯುವ ಈ ಪೆಣ್ ಗಿಲ್ಲ ಸೋಲು
ಇದು ಶತ ಸಿದ್ಧ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಕೊನೆಯ ಬರಹ

ಯುಗರ್ಷಿ

ಹುಟ್ಟುವ ಮೊದಲೇ ಸೋದರಮಾವನಿಗೆ ಅನಿಷ್ಟನಾದೆ, ಅದೇ ಮೂಲವಾಗಿ ತಂದೆ-ತಾಯಿಗೆ ಜೈಲು ಕಂಟಕನಾದೆ, ಅಲ್ಲಿಂದಲೆಂತೋ ಯಶೋಧೆಯ ಮಡಿಲು ಸೇರಿಕೊಂಡೆ, ಅಲ್ಲೇನು ಸುಖವ...