ಶನಿವಾರ, ಜುಲೈ 8, 2017

ನಾವು ನಾವು ಅರಿತರೆ ಮಾತ್ರ ತಾಯಿ ಭಾರತಿ

ಕವಿ ಶೈಲಕೆ ಒಲಿದ
ವೀಣಾಪಾಣಿ
ಇಣುಕೊಮ್ಮೆ ನಮ್ಮ
ಹಟ್ಟಿ, ಓಣಿ  ದಾರದಂಗಳಿಗೆ
ಕೊರಗುತಿಹರು, ಸೊರಗುತಿಹರು
ತಾಯಿ ಭಾರತೀಯ
ನಲ್ಮೆಯ ಕುಡಿಗಳು.

ವಿಲಾಸಕ್ಕೊಲಿದ ಧನಲಕ್ಷ್ಮೀ
ಒಲಿಯಿಲ್ಲಿ ನಮ್ಮ ತನು
ಮನಗಳಿಗೊಂದಿಷ್ಟು
ಉಲ್ಲಾಸ ತಂದೆರಚು
ನಾವು ಕುಂತು
ಉಣ್ಣುವೆವು ಕೆಲವು ದಿನ.

ಭೋಗ ಭಾಗ್ಯಕೊಲಿದ
ದೇವೇಂದ್ರ ಕಳಿಸು
ನಿನ್ನ ಗುಮಾಸ್ತರ
ಉಣ್ಣಲು ಉಡಲು
ಇಲ್ಲದ ನಮ್ಮ ಕೇರಿ
ಜನಗಳೊಡನೊಮ್ಮೆ
ಮಾತನಾಡಿಸು

ತೀರಿಗೆರಡು ಮಾರಿಗೊಂದು
ದೇವರುಗಳ ಕಡೆದು
ಕೂರಿಸಿದ್ದೇವೆ
ನಮಗಿಲ್ಲವಾದರೂ
ದೇವರನ್ನು ಸಲುಹಿಬಿಟ್ಟಿದ್ದೇವೆ
ಈಗಿದೇನು ಏನು
ನಿಮ್ಮ ಹಠ

ಬನ್ನಿ ಎಲ್ಲರೂ ಇಳಿದು
ಇಲ್ಲೊಮ್ಮೆ ನೋಡಿ
ಧರ್ಮಗಳು ಕತ್ತಿ
ಕೊಡಲಿಗಳ ಹಿಡಿದು
ನಿಂತಿವೆ. ಜಾತಿಗಳು
ಜುಟ್ಟು, ಜನಿವಾರಗಳಲ್ಲಿ
ಅಡಗಿ ಹೋಗಿವೆ

ಆಳುಗರು ಜಾತಿಗಳ
ಹೊಸ ಸೂತ್ರಧಾರರು,
ಹೆಸರೊಳಗೆ ಮಾತ್ರ
ಪ್ರಜೆಗಳು ಪ್ರಭುಗಳು
ದಿಟದಲಿ ಅವರೆಲ್ಲ
ಆಳಿಸಿಕೊಳ್ಳುವ
ಹಂಬಲದವರು

ಒಗ್ಗಟ್ಟಿನೊಳಗೆ ನಾವು ನಾವು
ಸಲಹಿಕೊಂಡರೆ ಮಾತ್ರ ದೇಶ
ನಾವು ನಾವು ಅರಿತರೆ
ಮಾತ್ರ ತಾಯಿ ಭಾರತಿ
ಆಳುಗರ ಕೈಗೆ ಜುಟ್ಟು
ಕೊಟ್ಟರೆ ನಮಗೆ ದೇವರೇ ಗತಿ!.
















ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಕೊನೆಯ ಬರಹ

ಉಟ್ಟ ಬಟ್ಟೆಯಲ್ಲಿ ಊರು ಬಿಟ್ಟವರ ಸಾಹಸಗಾಥೆ

ಬಹಳ ದಿನಗಳಿಂದ ಭಾರತೀಯ ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ, ಸ್ವಾತಂತ್ರ್ಯಾನಂತರ ದೇಶದೊಳಗೆ ಭುಗಿಲೆದ್ದ ಕೋಮು ಹಿಂಸಾಚಾರದ ಬಗ್ಗೆ ಬರೆಯಬೇಕು ಎಂದುಕೊಳ್ಳುತ್ತಿದೆ. ಸ್ವಾತಂತ್...