ಶುಕ್ರವಾರ, ನವೆಂಬರ್ 3, 2017

ನಮ್ಮ ನರೇಶ

ಎತ್ತರದ್ದೊಂದು ನಿಲುವು
ದಿಟ್ಟವಾದ್ದೊಂದು ನೋಟ
ಅರಿವ ಜ್ಞಾನಗಳೊಳಗೆ
ಸ್ಪಷ್ಟವಾದ್ದೊಂದು ಅರಿಮೆ
ನಡೆಯೊಳಗೆ ನಿಜ
ಜೀವನವರಿತ ಚತುರ

ಹೇಳಿ-ಕೇಳುವುದರೊಳಗಿನ
ನಂಬಿಕೆಗಳನೆಲ್ಲಾ ದೂರ ನೂಕಿ
ತನ್ನಾತ್ಮ ಸಂತೋಷದೊಳಗೆ
ತಲ್ಲೀನನಿವನು
ಸಂತೋಷಿಗಳೊಳಗೂ
ದುಃಖಿಗಳೊಳಗೂ
ಅವರೇ ಆಗಿ ನಿಂತುಬಿಡುವನೀ
ಹುಡುಗ

ಆಗಾಗ ಬೆದಕಿರುವ 'ನೀನೊಬ್ಬ ದಡ್ಡ'
ಇನ್ನೊಮ್ಮೆ ಕೆಣಕಿರುವ 'ನೀನೊಬ್ಬ ಅದಮ'
ಇನ್ನಾರಲ್ಲೋ ಉಸುರಿರುವ 'ನಾನೊಬ್ಬ ಮೂರ್ಖ ಶಿಖಾಮಣಿ'ಯೆಂದು
ಇನ್ನು ಏನೇನೊ ಜನರ ಭಾವಗಳು
ಎಲ್ಲವನೂ ಕಂತೆ ಮಾಡಿ
ನನ್ನತ್ತ ತೂರಿರುವ,
ನಿಜಜೀವನ ರಂಗದ ಮಜಲೊಂದನು
ಇಲ್ಲೇ ಪರಿಚಯಿಸಿರುವ

ನನಗರಿಯದ ಜಗದ ಬಾಗಿಲನು
ತೋರಿರುವ
ತಾನೆತ್ತಲೂ ಸುಳಿಯದೇ
ಧೀಮಂತನಂತೆ ಕೂತಿರುವ
ದಾರಿಗಾರರಿಗೆ ಅಡ್ಡಲಾಗದೆ
ಸುಮ್ಮನಿದ್ದವರ ಮುಂದೆ ದೂಡದೆ
ತಾನೊಬ್ಬ ತಾಳ್ಮೆ ತಳೆದು ನಗುತಿರುವ
ಅವನೇ ನಮ್ಮ ನರೇಶ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಕೊನೆಯ ಬರಹ

ಉಟ್ಟ ಬಟ್ಟೆಯಲ್ಲಿ ಊರು ಬಿಟ್ಟವರ ಸಾಹಸಗಾಥೆ

ಬಹಳ ದಿನಗಳಿಂದ ಭಾರತೀಯ ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ, ಸ್ವಾತಂತ್ರ್ಯಾನಂತರ ದೇಶದೊಳಗೆ ಭುಗಿಲೆದ್ದ ಕೋಮು ಹಿಂಸಾಚಾರದ ಬಗ್ಗೆ ಬರೆಯಬೇಕು ಎಂದುಕೊಳ್ಳುತ್ತಿದೆ. ಸ್ವಾತಂತ್...